BREAKING NEWS

ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ : ಬಿಜೆಪಿ ಮುಖಂಡ

ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ ಹೋದರೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ನಾನು ಹೇಳಿರೋದನ್ನು ಮಾಡಿಕೊಂಡು ಬಂದಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಕೊಡೀಕೆ ಆಗದೆ ಇದ್ದಾಗ ದುಡ್ಡು ಕೊಡಿ ಅಂತ ಹೇಳಿದ್ದೆ. ಅಜಯ್ ಸಿಂಗ್ ಅವರಿಗೆ ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನ ಕೋಡುವಂತೆ ಹೇಳಿದ್ದೆ. ಸಿದ್ದರಾಮಯ್ಯ ಅವರು ನಾನು ಹೇಳಿದ ಎರಡನ್ನು ಕೂಡ ಮಾಡಿದ್ದಾರೆ. ಹಾಗಾಗಿ, ಇದೊಂದು ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಅಧಿಕಾರ ಸ್ವಿಕಾರ ಮಾಡಿದ ದಿನದಿಂದ ಕಲಬುರಗಿಯಲ್ಲಿ ಲಾ ಅಂಡ್ ಆರ್ಡರ್ ಹದಗೆಟ್ಟಿದೆ. ಕಲಬುರ್ಗಿಯ ಜನರಿಗೆ ಪೊಲೀಸರಿಂದ ರಕ್ಷಣೆ ಸಿಗುತ್ತಿಲ್ಲ. ಜನರಿಗೆ ಪೊಲೀಸರು ಅಂದ್ರೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪ್ರಿಯಾಂಕ್ ಖರ್ಗೆ ಪೊಲೀಸರ ಸಭೆಯಲ್ಲಿ ಪೊಲೀಸರು ಅಂದ್ರೆ ಹೆದರಬೇಕು ಅಂತ ಹೇಳಿದ್ರು. ಹಾಗಾಗಿಯೇ ನಿನ್ನೆ ಮಾಡಬೂಳ ಪೊಲೀಸರು ನನ್ನ ಅರೆಸ್ಟ್ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿಕೆ ಹಿನ್ನೆಲೆ ನಾನು ದೂರು ನೀಡಿದ್ದೇನೆ. ಆದ್ರೆ, ಪೊಲೀಸರು ಜಸ್ಟ್ ರಿಸೀವಡ್ ಕೊಟ್ಟು ಕಳುಹಿಸಿದ್ದಾರೆ ಎಂದು ದೂರಿದ್ದಾರೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago