ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ ಹೋದರೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ನಾನು ಹೇಳಿರೋದನ್ನು ಮಾಡಿಕೊಂಡು ಬಂದಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಕೊಡೀಕೆ ಆಗದೆ ಇದ್ದಾಗ ದುಡ್ಡು ಕೊಡಿ ಅಂತ ಹೇಳಿದ್ದೆ. ಅಜಯ್ ಸಿಂಗ್ ಅವರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ಕೋಡುವಂತೆ ಹೇಳಿದ್ದೆ. ಸಿದ್ದರಾಮಯ್ಯ ಅವರು ನಾನು ಹೇಳಿದ ಎರಡನ್ನು ಕೂಡ ಮಾಡಿದ್ದಾರೆ. ಹಾಗಾಗಿ, ಇದೊಂದು ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ ಅಧಿಕಾರ ಸ್ವಿಕಾರ ಮಾಡಿದ ದಿನದಿಂದ ಕಲಬುರಗಿಯಲ್ಲಿ ಲಾ ಅಂಡ್ ಆರ್ಡರ್ ಹದಗೆಟ್ಟಿದೆ. ಕಲಬುರ್ಗಿಯ ಜನರಿಗೆ ಪೊಲೀಸರಿಂದ ರಕ್ಷಣೆ ಸಿಗುತ್ತಿಲ್ಲ. ಜನರಿಗೆ ಪೊಲೀಸರು ಅಂದ್ರೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪ್ರಿಯಾಂಕ್ ಖರ್ಗೆ ಪೊಲೀಸರ ಸಭೆಯಲ್ಲಿ ಪೊಲೀಸರು ಅಂದ್ರೆ ಹೆದರಬೇಕು ಅಂತ ಹೇಳಿದ್ರು. ಹಾಗಾಗಿಯೇ ನಿನ್ನೆ ಮಾಡಬೂಳ ಪೊಲೀಸರು ನನ್ನ ಅರೆಸ್ಟ್ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿಕೆ ಹಿನ್ನೆಲೆ ನಾನು ದೂರು ನೀಡಿದ್ದೇನೆ. ಆದ್ರೆ, ಪೊಲೀಸರು ಜಸ್ಟ್ ರಿಸೀವಡ್ ಕೊಟ್ಟು ಕಳುಹಿಸಿದ್ದಾರೆ ಎಂದು ದೂರಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…