BREAKING NEWS

ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ : ಬಿಜೆಪಿ ಮುಖಂಡ

ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ ಹೋದರೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ನಾನು ಹೇಳಿರೋದನ್ನು ಮಾಡಿಕೊಂಡು ಬಂದಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಕೊಡೀಕೆ ಆಗದೆ ಇದ್ದಾಗ ದುಡ್ಡು ಕೊಡಿ ಅಂತ ಹೇಳಿದ್ದೆ. ಅಜಯ್ ಸಿಂಗ್ ಅವರಿಗೆ ಕೆಕೆಆರ್​ಡಿಬಿ ಅಧ್ಯಕ್ಷ ಸ್ಥಾನ ಕೋಡುವಂತೆ ಹೇಳಿದ್ದೆ. ಸಿದ್ದರಾಮಯ್ಯ ಅವರು ನಾನು ಹೇಳಿದ ಎರಡನ್ನು ಕೂಡ ಮಾಡಿದ್ದಾರೆ. ಹಾಗಾಗಿ, ಇದೊಂದು ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಅಧಿಕಾರ ಸ್ವಿಕಾರ ಮಾಡಿದ ದಿನದಿಂದ ಕಲಬುರಗಿಯಲ್ಲಿ ಲಾ ಅಂಡ್ ಆರ್ಡರ್ ಹದಗೆಟ್ಟಿದೆ. ಕಲಬುರ್ಗಿಯ ಜನರಿಗೆ ಪೊಲೀಸರಿಂದ ರಕ್ಷಣೆ ಸಿಗುತ್ತಿಲ್ಲ. ಜನರಿಗೆ ಪೊಲೀಸರು ಅಂದ್ರೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪ್ರಿಯಾಂಕ್ ಖರ್ಗೆ ಪೊಲೀಸರ ಸಭೆಯಲ್ಲಿ ಪೊಲೀಸರು ಅಂದ್ರೆ ಹೆದರಬೇಕು ಅಂತ ಹೇಳಿದ್ರು. ಹಾಗಾಗಿಯೇ ನಿನ್ನೆ ಮಾಡಬೂಳ ಪೊಲೀಸರು ನನ್ನ ಅರೆಸ್ಟ್ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿಕೆ ಹಿನ್ನೆಲೆ ನಾನು ದೂರು ನೀಡಿದ್ದೇನೆ. ಆದ್ರೆ, ಪೊಲೀಸರು ಜಸ್ಟ್ ರಿಸೀವಡ್ ಕೊಟ್ಟು ಕಳುಹಿಸಿದ್ದಾರೆ ಎಂದು ದೂರಿದ್ದಾರೆ.

lokesh

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

39 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago