BREAKING NEWS

ಪ್ರಿಯಾಂಕ್ ಖರ್ಗೆ ₹ 10.29 ಕೋಟಿ ಆಸ್ತಿ ಒಡೆಯ

ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ ಇದೆ.

ಜಂಟಿಯಾಗಿ ₹ 96.96 ಲಕ್ಷ ಮೌಲ್ಯದ ಆಸ್ತಿಗಳಿವೆ. ಪುತ್ರ ಅಮಿತಾವ್ ಹೆಸರಿನಲ್ಲಿ ₹ 25.39 ಲಕ್ಷ, ಕಿರಿಯ ಪುತ್ರ ಅಕಾಂಕ್ಷ್ ಹೆಸರಿನಲ್ಲಿ ₹ 4.52 ಲಕ್ಷದ ಆಸ್ತಿಗಳಿವೆ.

ಪ್ರಿಯಾಂಕ್ ಅವರು ಗ್ರಾವಿಟಾಸ್ ಎಸ್ಟೇಟ್ಸ್‌, ಗ್ರಾವಿಟಾಸ್ ಇನ್ವೆಸ್ಟ್‌ಮೆಂಟ್ಸ್, ಟ್ರಿಪಲ್ ಜೆಮ್ ಪಾಲಿಪ್ಯಾಕ್ಸ್ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಯುಟಿಐ ಸಂಸ್ಥೆಯ ಉಳಿತಾಯ ಯೋಜನೆಯಲ್ಲಿ ಹಣ ತೊಡಗಿಸಿದ್ದಾರೆ. 2016ರಲ್ಲಿ ಹೋಂಡಾ ಸಿಆರ್‌ವಿ ಕಾರನ್ನು ಖರೀದಿ ಮಾಡಿದ್ದು, ಇದರ ಮೌಲ್ಯ ₹ 29.52 ಲಕ್ಷ. ₹ 32.50 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಥೌಟ್ ಕ್ಲೌಡ್ ಸ್ಟುಡಿಯೊ ಎಲ್‌ಎಲ್‌ಪಿಯಲ್ಲಿ ₹ 1.06 ಕೋಟಿ ಮೌಲ್ಯದ ಮೂಲ ಬಂಡವಾಳ ಹೂಡಿಕೆ ಮಾಡಿದ್ದಾರೆ.

ಬೆಂಗಳೂರಿನ ಆರ್‌.ಟಿ. ನಗರದಲ್ಲಿ ₹ 1.67 ಕೋಟಿ ಮೌಲ್ಯದ ಕಟ್ಟಡವಿದೆ. ಅರಮನೆ ರಸ್ತೆಯಲ್ಲಿ ₹ 1.02 ಕೋಟಿ ಮೌಲ್ಯದ ವಾಣಿಜ್ಯ ಮಳಿಗೆ ಇದೆ. ಕೆ.ಆರ್. ಪುರಂ ಹೋಬಳಿಯ ರಾಚೇನಹಳ್ಳಿಯಲ್ಲಿ ₹ 2.44 ಕೋಟಿ ಮೌಲ್ಯದ ಆಸ್ತಿ ಇದೆ. ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯಲ್ಲಿ ₹ 1.34 ಕೋಟಿ ಮೌಲ್ಯದ 46.28 ಎಕರೆ ಜಮೀನಿದೆ.

ಮಾನ ಹಾನಿ, ಮುಖ್ಯಮಂತ್ರಿಗಳ ಮನೆ ಎದುರು ಪ್ರತಿಭಟನೆ, ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿದ ಆರೋಪದ ಮೇರೆಗೆ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

lokesh

Recent Posts

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

24 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

1 hour ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

2 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

3 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

3 hours ago