BREAKING NEWS

ಪ್ರಿಯಾಂಕ್ ಖರ್ಗೆ ₹ 10.29 ಕೋಟಿ ಆಸ್ತಿ ಒಡೆಯ

ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ ಇದೆ.

ಜಂಟಿಯಾಗಿ ₹ 96.96 ಲಕ್ಷ ಮೌಲ್ಯದ ಆಸ್ತಿಗಳಿವೆ. ಪುತ್ರ ಅಮಿತಾವ್ ಹೆಸರಿನಲ್ಲಿ ₹ 25.39 ಲಕ್ಷ, ಕಿರಿಯ ಪುತ್ರ ಅಕಾಂಕ್ಷ್ ಹೆಸರಿನಲ್ಲಿ ₹ 4.52 ಲಕ್ಷದ ಆಸ್ತಿಗಳಿವೆ.

ಪ್ರಿಯಾಂಕ್ ಅವರು ಗ್ರಾವಿಟಾಸ್ ಎಸ್ಟೇಟ್ಸ್‌, ಗ್ರಾವಿಟಾಸ್ ಇನ್ವೆಸ್ಟ್‌ಮೆಂಟ್ಸ್, ಟ್ರಿಪಲ್ ಜೆಮ್ ಪಾಲಿಪ್ಯಾಕ್ಸ್ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಯುಟಿಐ ಸಂಸ್ಥೆಯ ಉಳಿತಾಯ ಯೋಜನೆಯಲ್ಲಿ ಹಣ ತೊಡಗಿಸಿದ್ದಾರೆ. 2016ರಲ್ಲಿ ಹೋಂಡಾ ಸಿಆರ್‌ವಿ ಕಾರನ್ನು ಖರೀದಿ ಮಾಡಿದ್ದು, ಇದರ ಮೌಲ್ಯ ₹ 29.52 ಲಕ್ಷ. ₹ 32.50 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಥೌಟ್ ಕ್ಲೌಡ್ ಸ್ಟುಡಿಯೊ ಎಲ್‌ಎಲ್‌ಪಿಯಲ್ಲಿ ₹ 1.06 ಕೋಟಿ ಮೌಲ್ಯದ ಮೂಲ ಬಂಡವಾಳ ಹೂಡಿಕೆ ಮಾಡಿದ್ದಾರೆ.

ಬೆಂಗಳೂರಿನ ಆರ್‌.ಟಿ. ನಗರದಲ್ಲಿ ₹ 1.67 ಕೋಟಿ ಮೌಲ್ಯದ ಕಟ್ಟಡವಿದೆ. ಅರಮನೆ ರಸ್ತೆಯಲ್ಲಿ ₹ 1.02 ಕೋಟಿ ಮೌಲ್ಯದ ವಾಣಿಜ್ಯ ಮಳಿಗೆ ಇದೆ. ಕೆ.ಆರ್. ಪುರಂ ಹೋಬಳಿಯ ರಾಚೇನಹಳ್ಳಿಯಲ್ಲಿ ₹ 2.44 ಕೋಟಿ ಮೌಲ್ಯದ ಆಸ್ತಿ ಇದೆ. ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯಲ್ಲಿ ₹ 1.34 ಕೋಟಿ ಮೌಲ್ಯದ 46.28 ಎಕರೆ ಜಮೀನಿದೆ.

ಮಾನ ಹಾನಿ, ಮುಖ್ಯಮಂತ್ರಿಗಳ ಮನೆ ಎದುರು ಪ್ರತಿಭಟನೆ, ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿದ ಆರೋಪದ ಮೇರೆಗೆ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

lokesh

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

9 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

9 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

10 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

10 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

10 hours ago