BREAKING NEWS

ಪ್ರಿಯಾಂಕ್ ಖರ್ಗೆ ₹ 10.29 ಕೋಟಿ ಆಸ್ತಿ ಒಡೆಯ

ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ ಇದೆ.

ಜಂಟಿಯಾಗಿ ₹ 96.96 ಲಕ್ಷ ಮೌಲ್ಯದ ಆಸ್ತಿಗಳಿವೆ. ಪುತ್ರ ಅಮಿತಾವ್ ಹೆಸರಿನಲ್ಲಿ ₹ 25.39 ಲಕ್ಷ, ಕಿರಿಯ ಪುತ್ರ ಅಕಾಂಕ್ಷ್ ಹೆಸರಿನಲ್ಲಿ ₹ 4.52 ಲಕ್ಷದ ಆಸ್ತಿಗಳಿವೆ.

ಪ್ರಿಯಾಂಕ್ ಅವರು ಗ್ರಾವಿಟಾಸ್ ಎಸ್ಟೇಟ್ಸ್‌, ಗ್ರಾವಿಟಾಸ್ ಇನ್ವೆಸ್ಟ್‌ಮೆಂಟ್ಸ್, ಟ್ರಿಪಲ್ ಜೆಮ್ ಪಾಲಿಪ್ಯಾಕ್ಸ್ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಯುಟಿಐ ಸಂಸ್ಥೆಯ ಉಳಿತಾಯ ಯೋಜನೆಯಲ್ಲಿ ಹಣ ತೊಡಗಿಸಿದ್ದಾರೆ. 2016ರಲ್ಲಿ ಹೋಂಡಾ ಸಿಆರ್‌ವಿ ಕಾರನ್ನು ಖರೀದಿ ಮಾಡಿದ್ದು, ಇದರ ಮೌಲ್ಯ ₹ 29.52 ಲಕ್ಷ. ₹ 32.50 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಥೌಟ್ ಕ್ಲೌಡ್ ಸ್ಟುಡಿಯೊ ಎಲ್‌ಎಲ್‌ಪಿಯಲ್ಲಿ ₹ 1.06 ಕೋಟಿ ಮೌಲ್ಯದ ಮೂಲ ಬಂಡವಾಳ ಹೂಡಿಕೆ ಮಾಡಿದ್ದಾರೆ.

ಬೆಂಗಳೂರಿನ ಆರ್‌.ಟಿ. ನಗರದಲ್ಲಿ ₹ 1.67 ಕೋಟಿ ಮೌಲ್ಯದ ಕಟ್ಟಡವಿದೆ. ಅರಮನೆ ರಸ್ತೆಯಲ್ಲಿ ₹ 1.02 ಕೋಟಿ ಮೌಲ್ಯದ ವಾಣಿಜ್ಯ ಮಳಿಗೆ ಇದೆ. ಕೆ.ಆರ್. ಪುರಂ ಹೋಬಳಿಯ ರಾಚೇನಹಳ್ಳಿಯಲ್ಲಿ ₹ 2.44 ಕೋಟಿ ಮೌಲ್ಯದ ಆಸ್ತಿ ಇದೆ. ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯಲ್ಲಿ ₹ 1.34 ಕೋಟಿ ಮೌಲ್ಯದ 46.28 ಎಕರೆ ಜಮೀನಿದೆ.

ಮಾನ ಹಾನಿ, ಮುಖ್ಯಮಂತ್ರಿಗಳ ಮನೆ ಎದುರು ಪ್ರತಿಭಟನೆ, ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿದ ಆರೋಪದ ಮೇರೆಗೆ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

lokesh

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

35 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago