BREAKING NEWS

ಪ್ರಿಯಾಂಕ್ ಖರ್ಗೆ ₹ 10.29 ಕೋಟಿ ಆಸ್ತಿ ಒಡೆಯ

ಕಲಬುರಗಿ : ಚಿತ್ತಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸೋಮವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರ ಆಸ್ತಿ ₹ 10.29 ಕೋಟಿ ಇದೆ. ಅವರ ಪತ್ನಿ ಶ್ರುತಿ ಖರ್ಗೆ ಅವರ ಹೆಸರಿನಲ್ಲಿ ₹ 72.38 ಲಕ್ಷದ ಆಸ್ತಿ ಇದೆ.

ಜಂಟಿಯಾಗಿ ₹ 96.96 ಲಕ್ಷ ಮೌಲ್ಯದ ಆಸ್ತಿಗಳಿವೆ. ಪುತ್ರ ಅಮಿತಾವ್ ಹೆಸರಿನಲ್ಲಿ ₹ 25.39 ಲಕ್ಷ, ಕಿರಿಯ ಪುತ್ರ ಅಕಾಂಕ್ಷ್ ಹೆಸರಿನಲ್ಲಿ ₹ 4.52 ಲಕ್ಷದ ಆಸ್ತಿಗಳಿವೆ.

ಪ್ರಿಯಾಂಕ್ ಅವರು ಗ್ರಾವಿಟಾಸ್ ಎಸ್ಟೇಟ್ಸ್‌, ಗ್ರಾವಿಟಾಸ್ ಇನ್ವೆಸ್ಟ್‌ಮೆಂಟ್ಸ್, ಟ್ರಿಪಲ್ ಜೆಮ್ ಪಾಲಿಪ್ಯಾಕ್ಸ್ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಯುಟಿಐ ಸಂಸ್ಥೆಯ ಉಳಿತಾಯ ಯೋಜನೆಯಲ್ಲಿ ಹಣ ತೊಡಗಿಸಿದ್ದಾರೆ. 2016ರಲ್ಲಿ ಹೋಂಡಾ ಸಿಆರ್‌ವಿ ಕಾರನ್ನು ಖರೀದಿ ಮಾಡಿದ್ದು, ಇದರ ಮೌಲ್ಯ ₹ 29.52 ಲಕ್ಷ. ₹ 32.50 ಲಕ್ಷ ಮೌಲ್ಯದ 650 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಥೌಟ್ ಕ್ಲೌಡ್ ಸ್ಟುಡಿಯೊ ಎಲ್‌ಎಲ್‌ಪಿಯಲ್ಲಿ ₹ 1.06 ಕೋಟಿ ಮೌಲ್ಯದ ಮೂಲ ಬಂಡವಾಳ ಹೂಡಿಕೆ ಮಾಡಿದ್ದಾರೆ.

ಬೆಂಗಳೂರಿನ ಆರ್‌.ಟಿ. ನಗರದಲ್ಲಿ ₹ 1.67 ಕೋಟಿ ಮೌಲ್ಯದ ಕಟ್ಟಡವಿದೆ. ಅರಮನೆ ರಸ್ತೆಯಲ್ಲಿ ₹ 1.02 ಕೋಟಿ ಮೌಲ್ಯದ ವಾಣಿಜ್ಯ ಮಳಿಗೆ ಇದೆ. ಕೆ.ಆರ್. ಪುರಂ ಹೋಬಳಿಯ ರಾಚೇನಹಳ್ಳಿಯಲ್ಲಿ ₹ 2.44 ಕೋಟಿ ಮೌಲ್ಯದ ಆಸ್ತಿ ಇದೆ. ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯಲ್ಲಿ ₹ 1.34 ಕೋಟಿ ಮೌಲ್ಯದ 46.28 ಎಕರೆ ಜಮೀನಿದೆ.

ಮಾನ ಹಾನಿ, ಮುಖ್ಯಮಂತ್ರಿಗಳ ಮನೆ ಎದುರು ಪ್ರತಿಭಟನೆ, ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿದ ಆರೋಪದ ಮೇರೆಗೆ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

lokesh

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

4 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

5 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

5 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago