ಬೆಂಗಳೂರು: ರಾಜ್ಯ ಸಭಾ ಚುನಾವಣೆ ನಂತರ ವಿಧಾನ ಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದಡಿಯಲ್ಲಿ ಮೂವರನ್ನು ವಿಧಾನ ಸೌಧ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್.ಟಿ.ನಗರದ ನಿವಾಸಿ ಮುನಾವರ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ದೆಹಲಿ ಮೂಲದ ಇಲ್ತಾಜ್ ಎಂಬುವವರನ್ನು ಪಾಕ್ ಪರ ಘೋಷಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ, ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೊಷಣೆ ಕೂಗಿದ ಆರೋಪ ಕೇಳಿಬಂದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಭಾರಿ ಗದ್ದಲಕ್ಕೆ ದಾರಿ ಮಾಡಿಕೊಟ್ಟಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ನಡೆಸಲಾಗಿತ್ತು. ಅದರಲ್ಲಿ ಮೂವರ ವಾಯ್ಸ್ ಸ್ಯಾಂಪಲ್ಸ್ ಹಾಗೂ ದೃಶ್ಯಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಿದೆ.
ಈ ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಅಸಮಧಾನ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…