ಬೆಂಗಳೂರು: ರಾಜ್ಯ ಸಭಾ ಚುನಾವಣೆ ನಂತರ ವಿಧಾನ ಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದಡಿಯಲ್ಲಿ ಮೂವರನ್ನು ವಿಧಾನ ಸೌಧ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್.ಟಿ.ನಗರದ ನಿವಾಸಿ ಮುನಾವರ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ದೆಹಲಿ ಮೂಲದ ಇಲ್ತಾಜ್ ಎಂಬುವವರನ್ನು ಪಾಕ್ ಪರ ಘೋಷಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ, ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೊಷಣೆ ಕೂಗಿದ ಆರೋಪ ಕೇಳಿಬಂದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಭಾರಿ ಗದ್ದಲಕ್ಕೆ ದಾರಿ ಮಾಡಿಕೊಟ್ಟಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ನಡೆಸಲಾಗಿತ್ತು. ಅದರಲ್ಲಿ ಮೂವರ ವಾಯ್ಸ್ ಸ್ಯಾಂಪಲ್ಸ್ ಹಾಗೂ ದೃಶ್ಯಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಿದೆ.
ಈ ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಅಸಮಧಾನ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…