ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ನೀಡಿದ್ದ ಅನುಮತಿಯನ್ನು ಹೈ ಕೋರ್ಟ್ ನ ಏಕಸದಸ್ಯಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಈ ಪ್ರಕಣವನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಹೈ ಕೋರ್ಟ್ನ ದ್ವಿ ಸದಸ್ಯ ಪೀಠ ತಡೆ ನೀಡಿತ್ತು. ಈ ತಡೆಯಾಗ್ನೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂ ಅಂಗಳ ತಲುಪಿತ್ತು. ಈ ಪ್ರಕರಣವನ್ನು ಸುಪ್ರಿಂ ಕೋರ್ಟ್ ಮತ್ತೆ ಹೈ ಕೋರ್ಟ್ಗೆ ವಹಿಸಿ ಆದೇಶ ಹೊರಡಿಸಿತ್ತು. ಅದರನ್ವಯ ಇಂದು ಹೈ ಕೋರ್ಟ್ ನ ದ್ವಿಸದಸ್ಯ ಪೀಠದಲ್ಲಿ ಇಂದು ಡಿಕೆಶಿ ಅರ್ಜಿಯ ವಿಚಾರಣೆ ನಡೆಯಲಿದೆ.
ನವೆಂಬರ್ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್ನ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿತ್ತು.
ವಿಚಾರಣೆಯ ವೇಳೆ ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲರು ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ, ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.
ವಾದ ಆಲಿಸಿದ ನ್ಯಾಯಾಧೀಶರು ಹೈ ಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರು ಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡುವ ಮೂಲಕ ಪ್ರಕರಣವನ್ನು ಮತ್ತೊಮ್ಮೆ ಹೈ ಅಂಗಳಕ್ಕೆಸೆದಿದ್ದರು. ಹಾಗಾಗಿ ಇಂದು ಆ ಪ್ರಕರಣದ ವಿಚಾರಣೆ ನಡೆಯಲಿದೆ.
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…
ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ ಚಾಮರಾಜನಗರ: ಬಿಸಿಲ ತಾಪ…
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…