BREAKING NEWS

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಹೈ ಕೋರ್ಟ್‌ನಲ್ಲಿ ಡಿಕೆಶಿ ಮೇಲ್ಮನವಿ ವಿಚಾರಣೆ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್‌ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.

ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್‌ ನೀಡಿದ್ದ ಅನುಮತಿಯನ್ನು ಹೈ ಕೋರ್ಟ್‌ ನ ಏಕಸದಸ್ಯಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಈ ಪ್ರಕಣವನ್ನು ಪುನರ್‌ ಪರಿಶೀಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಹೈ ಕೋರ್ಟ್‌ನ ದ್ವಿ ಸದಸ್ಯ ಪೀಠ ತಡೆ ನೀಡಿತ್ತು. ಈ ತಡೆಯಾಗ್ನೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂ ಅಂಗಳ ತಲುಪಿತ್ತು. ಈ ಪ್ರಕರಣವನ್ನು ಸುಪ್ರಿಂ ಕೋರ್ಟ್‌ ಮತ್ತೆ ಹೈ ಕೋರ್ಟ್‌ಗೆ ವಹಿಸಿ ಆದೇಶ ಹೊರಡಿಸಿತ್ತು. ಅದರನ್ವಯ ಇಂದು ಹೈ ಕೋರ್ಟ್‌ ನ ದ್ವಿಸದಸ್ಯ ಪೀಠದಲ್ಲಿ ಇಂದು ಡಿಕೆಶಿ ಅರ್ಜಿಯ ವಿಚಾರಣೆ ನಡೆಯಲಿದೆ.

ನವೆಂಬರ್‌ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್‌ನ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್‌ ನಲ್ಲಿಯೇ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿತ್ತು.

ವಿಚಾರಣೆಯ ವೇಳೆ ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲರು ಹೈ ಕೋರ್ಟ್‌ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ, ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.

ವಾದ ಆಲಿಸಿದ ನ್ಯಾಯಾಧೀಶರು ಹೈ ಕೋರ್ಟ್‌ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರು ಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡುವ ಮೂಲಕ ಪ್ರಕರಣವನ್ನು ಮತ್ತೊಮ್ಮೆ ಹೈ ಅಂಗಳಕ್ಕೆಸೆದಿದ್ದರು. ಹಾಗಾಗಿ ಇಂದು ಆ ಪ್ರಕರಣದ ವಿಚಾರಣೆ ನಡೆಯಲಿದೆ.

lokesh

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

8 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

8 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

11 hours ago