ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ನೀಡಿದ್ದ ಅನುಮತಿಯನ್ನು ಹೈ ಕೋರ್ಟ್ ನ ಏಕಸದಸ್ಯಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಈ ಪ್ರಕಣವನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಹೈ ಕೋರ್ಟ್ನ ದ್ವಿ ಸದಸ್ಯ ಪೀಠ ತಡೆ ನೀಡಿತ್ತು. ಈ ತಡೆಯಾಗ್ನೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂ ಅಂಗಳ ತಲುಪಿತ್ತು. ಈ ಪ್ರಕರಣವನ್ನು ಸುಪ್ರಿಂ ಕೋರ್ಟ್ ಮತ್ತೆ ಹೈ ಕೋರ್ಟ್ಗೆ ವಹಿಸಿ ಆದೇಶ ಹೊರಡಿಸಿತ್ತು. ಅದರನ್ವಯ ಇಂದು ಹೈ ಕೋರ್ಟ್ ನ ದ್ವಿಸದಸ್ಯ ಪೀಠದಲ್ಲಿ ಇಂದು ಡಿಕೆಶಿ ಅರ್ಜಿಯ ವಿಚಾರಣೆ ನಡೆಯಲಿದೆ.
ನವೆಂಬರ್ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್ನ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿತ್ತು.
ವಿಚಾರಣೆಯ ವೇಳೆ ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲರು ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ, ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.
ವಾದ ಆಲಿಸಿದ ನ್ಯಾಯಾಧೀಶರು ಹೈ ಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರು ಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡುವ ಮೂಲಕ ಪ್ರಕರಣವನ್ನು ಮತ್ತೊಮ್ಮೆ ಹೈ ಅಂಗಳಕ್ಕೆಸೆದಿದ್ದರು. ಹಾಗಾಗಿ ಇಂದು ಆ ಪ್ರಕರಣದ ವಿಚಾರಣೆ ನಡೆಯಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…