BREAKING NEWS

ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರ ರಕ್ಷಣೆ : ಹೆಚ್​ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.

ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ‌ ಅಧಿಕಾರಿಗಳ ತಂಡ ರಚಿಸಿ ಮಾಹಿತಿ‌ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್​ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್​ಪಿಎಫ್​​ನ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್​ಪಿಎಫ್ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

54 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago