BREAKING NEWS

ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರ ರಕ್ಷಣೆ : ಹೆಚ್​ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.

ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ‌ ಅಧಿಕಾರಿಗಳ ತಂಡ ರಚಿಸಿ ಮಾಹಿತಿ‌ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್​ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್​ಪಿಎಫ್​​ನ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್​ಪಿಎಫ್ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.

lokesh

Recent Posts

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

6 mins ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

59 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

4 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

4 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

4 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

4 hours ago