BREAKING NEWS

ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರ ರಕ್ಷಣೆ : ಹೆಚ್​ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.

ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ‌ ಅಧಿಕಾರಿಗಳ ತಂಡ ರಚಿಸಿ ಮಾಹಿತಿ‌ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್​ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್​ಪಿಎಫ್​​ನ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್​ಪಿಎಫ್ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.

lokesh

Recent Posts

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

24 mins ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

33 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

36 mins ago

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

1 hour ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

1 hour ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

2 hours ago