BREAKING NEWS

ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರ ರಕ್ಷಣೆ : ಹೆಚ್​ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.

ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ‌ ಅಧಿಕಾರಿಗಳ ತಂಡ ರಚಿಸಿ ಮಾಹಿತಿ‌ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್​ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್​ಪಿಎಫ್​​ನ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್​ಪಿಎಫ್ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.

lokesh

Recent Posts

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

8 hours ago