BREAKING NEWS

ಅಮರನಾಥ ಯಾತ್ರೆ ಕೈಗೊಂಡಿದ್ದ 300 ಕನ್ನಡಿಗರ ರಕ್ಷಣೆ : ಹೆಚ್​ಕೆ ಪಾಟೀಲ್

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.

ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ‌ ಅಧಿಕಾರಿಗಳ ತಂಡ ರಚಿಸಿ ಮಾಹಿತಿ‌ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್​ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್​ಪಿಎಫ್​​ನ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್​ಪಿಎಫ್ ಕ್ಯಾಂಪ್​ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.

lokesh

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

2 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

5 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

8 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

11 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

11 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

11 hours ago