BREAKING NEWS

ಭಕ್ತರಿಗೆ ಸರಿಯಾದ ಅನುಕೂಲ ಕಲ್ಪಿಸಿ: ಕೇರಳ ಸರ್ಕಾರಕ್ಕೆ ಕೋರ್ಟ್‌ ಚಾಟಿ

ಸುಮಾರು 310 ಕೋಟಿ ಆದಾಯವಿದ್ದರೂ ಶಬರಿಮಲೆ ಅವ್ಯವಸ್ಥೆಯ ತಾಣವಾಗಿದೆ. ಶಬರಿಮಲೆಗೆ ಭೇಟಿ ನೀಡುವ ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ.

ಕಳೆದ ವರ್ಷ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 310 ಕೋಟಿ ರೂಪಾಯಿಗೂ ಅಧಿಕ ಆದಾಯ ಬಂದಿತ್ತು. ಇಬ್ಬರು ವಕೀಲರು ಸಲ್ಲಿಸಿರುವ ಅರ್ಜಿಗಳಲ್ಲಿ, ಭಕ್ತರು ಇರುವ ವಿಶ್ರಾಂತಿ ಗೃಹಗಳಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲ. ದೇವರ ದರ್ಶನಕ್ಕೆ ಹೋಗುವ ಸರತಿ ಸಾಲು ಪದ್ಧತಿ ಸರಿಯಿಲ್ಲ ಎಂದು ಹೇಳಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್, ಶಬರಿಮಲೆಯಲ್ಲಿ ಶುಚಿತ್ವವನ್ನು ಕಾಪಾಡುವಂತೆ ಸೂಚನೆ ನೀಡಿದೆ ಹಾಗೂ ಅಲ್ಲದೆ ಸರತಿ ಸಾಲಿನಲ್ಲಿ ಉಂಟಾಗುವ ಸಮಸ್ಯೆಯನ್ನು ನಿವಾರಿಸಿ ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.

ಶಬರಿಮಲೆ ವಿವಾದದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿರುವ ಕೇರಳ ಹೈಕೋರ್ಟ್, ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಪೊಲೀಸರು ಕೈಗೊಂಡ ಜನಸಂದಣಿ ನಿಯಂತ್ರಣ ಕ್ರಮಗಳನ್ನು ಬುಧವಾರ ವಿಚಾರಣೆ ನಡೆಸಲಿದೆ. ಅನಿಲ್ ನರೇಂದ್ರನ್ ಮತ್ತು ಜಿ.ಗಿರೀಶ್ ಅವರನ್ನೊಳಗೊಂಡ ಪೀಠವು ಕ್ರಮಗಳನ್ನು ಪರಿಶೀಲಿಸಲಿದೆ.

ದರ್ಶನ ಪಡೆಯಲು ಗಂಟೆಗಟ್ಟಲೆ ಕಾಯಬೇಕಾದ ಭಕ್ತರಿಗೆ ಸಾಕಷ್ಟು ಪಾರ್ಕಿಂಗ್ ಸೌಲಭ್ಯಗಳು ಮತ್ತು ಆಹಾರ ಮತ್ತು ಪಾನೀಯಗಳನ್ನು ವ್ಯವಸ್ಥೆ ಮಾಡುವಂತೆ ಈ ಹಿಂದೆ ಅದು ಟಿಡಿಬಿ ಮತ್ತು ಪೊಲೀಸರಿಗೆ ನಿರ್ದೇಶನ ನೀಡಿತ್ತು. ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿ ಜನಸಂದಣಿಯನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

ದಿನಕ್ಕೆ ಲಕ್ಷ ಮಂದಿ ಭೇಟಿ:
ಪ್ರಸ್ತುತ 1.2 ಲಕ್ಷ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಿದ್ದಾರೆ , ಈ ಪೈಕಿ ಸುಮಾರು 80,000 ಜನರು ವರ್ಚುವಲ್ ಕ್ಯೂಗಳನ್ನು ಬಳಸುತ್ತಾರೆ, 20,000 ಜನರು ಸ್ಪಾಟ್ ಬುಕಿಂಗ್ ಮೂಲಕ ಮತ್ತು ಉಳಿದವರು ಸಾಂಪ್ರದಾಯಿಕ ಮಾರ್ಗಗಳ ಮೂಲಕ ಬರುತ್ತಾರೆ. ಒಂದು ಗಂಟೆಯಲ್ಲಿ 4,200 ಜನರಿಗೆ 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಅವಕಾಶ ನೀಡಿದರೆ ಜನಸಂದಣಿಯನ್ನು ನಿಭಾಯಿಸಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

7 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

17 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

41 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

59 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago