BREAKING NEWS

ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ: ಪರಮೇಶ್ವರ್‌

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ, ಸಿಐಟಿ ಪರೀಕ್ಷೆಯಲ್ಲಿ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಅಕ್ರಮ ನಡೆದಿದ್ದೇ ಆದರೆ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿಯೇ ಪಿಎಸ್‌ಐ ನೇಮಕ ಪರೀಕ್ಷೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಸಿದಂತೆ ಗುಪ್ರಚರ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಪಿಎಸ್ಐ ಲಿಂಗಯ್ಯ ಹೇಳಿದ್ದಾರೆ. ಆಡಿಯೋ ಸತ್ಯನಾ, ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಮೊದಲನೇ ಹಂತದಲ್ಲಿ ಸಮಿತಿ ರಚನೆ ಮಾಡಿದ್ದಾರೆ. ಅದರಿಂದ ಸಂವಿಧಾನ ತಿದ್ದುಪಡಿ ಆಗಲಿದೆಯಾ ಅಥವಾ ಇಲ್ಲವಾ ಎಂಬ ವರದಿ ನೀಡುತ್ತಾರೆ. ಸಮಿತಿಯ ಸದಸ್ಯರ ಶಿಫಾರಸ್ಸು ಏನೆಂದು ನೋಡಬೇಕು ಎಂದರು.

ಲೋಕಸಭಾ ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರವಾಗಿ, ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಅದರಲ್ಲಿ ನಮ್ಮ ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷರು ಬಂದಿದ್ದರು. ನಮಗೆ ಕೊಟ್ಟಿರುವ ಜವಾಬ್ದಾರಿಗಳ ಮೇಲೆ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.

andolanait

Recent Posts

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

1 hour ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

1 hour ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

1 hour ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

2 hours ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

2 hours ago