BREAKING NEWS

ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ: ಪರಮೇಶ್ವರ್‌

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ, ಸಿಐಟಿ ಪರೀಕ್ಷೆಯಲ್ಲಿ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಅಕ್ರಮ ನಡೆದಿದ್ದೇ ಆದರೆ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿಯೇ ಪಿಎಸ್‌ಐ ನೇಮಕ ಪರೀಕ್ಷೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಸಿದಂತೆ ಗುಪ್ರಚರ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಪಿಎಸ್ಐ ಲಿಂಗಯ್ಯ ಹೇಳಿದ್ದಾರೆ. ಆಡಿಯೋ ಸತ್ಯನಾ, ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಮೊದಲನೇ ಹಂತದಲ್ಲಿ ಸಮಿತಿ ರಚನೆ ಮಾಡಿದ್ದಾರೆ. ಅದರಿಂದ ಸಂವಿಧಾನ ತಿದ್ದುಪಡಿ ಆಗಲಿದೆಯಾ ಅಥವಾ ಇಲ್ಲವಾ ಎಂಬ ವರದಿ ನೀಡುತ್ತಾರೆ. ಸಮಿತಿಯ ಸದಸ್ಯರ ಶಿಫಾರಸ್ಸು ಏನೆಂದು ನೋಡಬೇಕು ಎಂದರು.

ಲೋಕಸಭಾ ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರವಾಗಿ, ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಅದರಲ್ಲಿ ನಮ್ಮ ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷರು ಬಂದಿದ್ದರು. ನಮಗೆ ಕೊಟ್ಟಿರುವ ಜವಾಬ್ದಾರಿಗಳ ಮೇಲೆ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

58 mins ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 hour ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

6 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

6 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 hours ago