BREAKING NEWS

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.

ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.

ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅ.7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.

ಹಾಗೆಯೇ, ಆ ದಿನಗಳಲ್ಲಿ ಸ್ಟ್ರಾಂಗ್‌ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದರು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್.ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ(ಸಿಆರ್‌ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ.

ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೆಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.

ಪ್ರಕರಣವೇನು?: ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪವಿದೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 mins ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

51 mins ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

60 mins ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

2 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

2 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

2 hours ago