BREAKING NEWS

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.

ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.

ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅ.7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.

ಹಾಗೆಯೇ, ಆ ದಿನಗಳಲ್ಲಿ ಸ್ಟ್ರಾಂಗ್‌ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದರು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್.ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ(ಸಿಆರ್‌ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ.

ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೆಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.

ಪ್ರಕರಣವೇನು?: ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪವಿದೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago