BREAKING NEWS

ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪಾಲ್​ಗೆ ಷರತ್ತು ಬದ್ದ ಜಾಮೀನು

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ರೂ. ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.

2021ರ ಅಕ್ಟೋಬರ್ 3ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.

ಅಮೃತ್ ಪೌಲ್ ಪಿಎಸ್‌ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

12 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

16 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

17 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

17 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

17 hours ago