BREAKING NEWS

ಪಿಎಸ್ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್, ನಾವು ಅಧಿಕಾರಕ್ಕೆ ಬಂದರೆ ಹಗರಣದ ತನಿಖೆ ನಡೆಸುವುದಾಗಿ ಹೇಳಿತ್ತು.

ಈ ಬಗ್ಗೆ ಅಧಿಕೃತವಾಗಿ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪಿಎಸ್ಐ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago