BREAKING NEWS

ಪಿಎಸ್ಐ ನೇಮಕಾತಿ ಹಗರಣ| ಮರು ಪರೀಕ್ಷೆ ಕುರಿತು ಮಾಹಿತಿ ನೀಡಲು ಸರ್ಕಾರಕ್ಕೆ ಜುಲೈ 5ರವರೆಗೆ ಕಾಲಾವಕಾಶ: ಹೈಕೋರ್ಟ್‌

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಜೂನ್‌ 15ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಆರೋಪ ಪಟ್ಟಿಯಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಬಹುದೇ, ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಅಡ್ವೊಕೇಟ್ ಜನರಲ್ (ಎಜಿ) ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿತ್ತು.

ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಎಜಿ ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ಸೂಚನೆಯಂತೆ ಆರೋಪ ಪಟ್ಟಿಯಲ್ಲಿ ಹೆಸರಿರದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ನಿರ್ಧಾರ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದನ್ನು ಪರಿಗಣಿಸಿದ ಪೀಠವು ಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago