BREAKING NEWS

ಸಿಂಗಾಪುರದ 7 ಉಪಗ್ರಹಗಳನ್ನು ಹೊತ್ತು ಯಶಸ್ವಿಯಾಗಿ ಉಡಾವಣೆಯಾದ ಪಿಎಸ್​ಎಲ್​ವಿ-ಸಿ56

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾಥಮಿಕ ಉಪಗ್ರಹ ಡಿಎಸ್-ಎಸ್‌ಎಆರ್, 6 ಸಹ-ಪ್ರಯಾಣಿಕ ಉಪಗ್ರಹಗಳು ಸೇರಿದಂತೆ 7 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಇಂದು ಬೆಳಗ್ಗೆ 6:30ಕ್ಕೆ ಉಪಗ್ರಹಗಳನ್ನು ಉಡಾವಣೆ ಮಾಡಲಾಯಿತು. ಎಲ್ಲ ಏಳು ಉಪಗ್ರಹಗಳನ್ನು ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ ನಿಖರವಾಗಿ ಅವುಗಳ ಕಕ್ಷೆಗೆ ಸೇರಿಸಿದೆ.

ಡಿಎಸ್‌-ಎಸ್‌ಎಆರ್‌ ಮತ್ತು ಉಳಿದ 6 ಉಪಗ್ರಹಗಳು ಸಿಂಗಾಪುರಕ್ಕೆ ಸೇರಿದ್ದವಾಗಿವೆ. ಸಿಂಗಾಪುರದ ಎಸ್‌ಟಿ ಇಂಜಿನಿಯರಿಂಗ್‌ ಸಂಸ್ಥೆಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಈ ಕಾರ್ಯಾಚರಣೆ ನಡೆಸಿದೆ.

ಡಿಎಸ್‌-ಎಸ್‌ಎಆರ್‌ ಉಪಗ್ರಹ ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ ಮತ್ತು ಎಸ್‌ಟಿ ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಡಿಎಸ್‌-ಎಸ್‌ಎಆರ್‌ ಎಲ್ಲಾ ಹವಾಗುಣದಲ್ಲಿ ಹಗಲು-ರಾತ್ರಿ ಸೇವೆ ಒದಗಿಸುತ್ತದೆ. ಪೂರ್ಣ ಧ್ರುವೀಯತೆಯಲ್ಲಿ 1m-ರೆಸಲ್ಯೂಶನ್‌ನಲ್ಲಿ ಚಿತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

1 hour ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

1 hour ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

1 hour ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago