ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾಥಮಿಕ ಉಪಗ್ರಹ ಡಿಎಸ್-ಎಸ್ಎಆರ್, 6 ಸಹ-ಪ್ರಯಾಣಿಕ ಉಪಗ್ರಹಗಳು ಸೇರಿದಂತೆ 7 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ-ಸಿ 56 ರಾಕೆಟ್ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಂದು ಬೆಳಗ್ಗೆ 6:30ಕ್ಕೆ ಉಪಗ್ರಹಗಳನ್ನು ಉಡಾವಣೆ ಮಾಡಲಾಯಿತು. ಎಲ್ಲ ಏಳು ಉಪಗ್ರಹಗಳನ್ನು ಪಿಎಸ್ಎಲ್ವಿ-ಸಿ 56 ರಾಕೆಟ್ ನಿಖರವಾಗಿ ಅವುಗಳ ಕಕ್ಷೆಗೆ ಸೇರಿಸಿದೆ.
ಡಿಎಸ್-ಎಸ್ಎಆರ್ ಮತ್ತು ಉಳಿದ 6 ಉಪಗ್ರಹಗಳು ಸಿಂಗಾಪುರಕ್ಕೆ ಸೇರಿದ್ದವಾಗಿವೆ. ಸಿಂಗಾಪುರದ ಎಸ್ಟಿ ಇಂಜಿನಿಯರಿಂಗ್ ಸಂಸ್ಥೆಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ಈ ಕಾರ್ಯಾಚರಣೆ ನಡೆಸಿದೆ.
ಡಿಎಸ್-ಎಸ್ಎಆರ್ ಉಪಗ್ರಹ ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ ಮತ್ತು ಎಸ್ಟಿ ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಡಿಎಸ್-ಎಸ್ಎಆರ್ ಎಲ್ಲಾ ಹವಾಗುಣದಲ್ಲಿ ಹಗಲು-ರಾತ್ರಿ ಸೇವೆ ಒದಗಿಸುತ್ತದೆ. ಪೂರ್ಣ ಧ್ರುವೀಯತೆಯಲ್ಲಿ 1m-ರೆಸಲ್ಯೂಶನ್ನಲ್ಲಿ ಚಿತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…