BREAKING NEWS

ಪುಲ್ವಾಮ ದಾಳಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು: ಸತ್ಯಪಾಲ್‌ ಆಗ್ರಹ

ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ.

ಆ ವರ್ಷದ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ರಾಜಕೀಕರಣಗೊಳಿಸಿದರು ಎಂದೂ ಅವರು ಆರೋಪಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ನವದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸತ್ಯಪಾಲ್ ಮಲಿಕ್ ಅವರು ಈ ಹತ್ಯೆಗಳ ಕುರಿತು ಸರ್ಕಾರದ ಮೌನದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು The Telegraph ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಕೊನೆಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಾಗಿದ್ದು, ಅವರು ಆ ಹುದ್ದೆಯಲ್ಲಿದ್ದಾಗಲೇ ಪುಲ್ವಾಮಾ ಉಗ್ರರ ದಾಳಿಯು ನಡೆದಿತ್ತು.

“40 ಮಂದಿ ಯೋಧರ ಹತ್ಯೆಗೆ ಕಾರಣವಾದ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಇಲ್ಲಿಯವರೆಗೆ ಈ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಕಡು ಮೌನ ಪ್ರದರ್ಶಿಸಿದೆ ಹಾಗೂ ಈ ದುರಂತದಲ್ಲಿನ ಹತ್ಯೆಗಳಿಗೆ ತನ್ನ ಭದ್ರತಾ ವೈಫಲ್ಯವೇ ಕಾರಣ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ” ಎಂದು ಅವರು ಟೀಕಿಸಿದ್ದಾರೆ.

ಪುಲ್ವಾಮಾ ಉಗ್ರರ ದಾಳಿಯ ಕುರಿತು ಸರ್ಕಾರ ಹೊಣೆಗಾರಿಕೆ ಹೊರಬೇಕು ಎಂದು ಸತ್ಯಪಾಲ್ ಮಲಿಕ್ ಇದೇ ಪ್ರಥಮ ಬಾರಿಗೆ ಆಗ್ರಹಿಸುತ್ತಿರುವುದಲ್ಲ. The Wire ಸುದ್ದಿ ಸಂಸ್ಥೆಯ ಕರಣ್ ಥಾಪರ್ ಗೆ ಸ್ಫೋಟಕ ಸಂದರ್ಶನ ನೀಡಿದ್ದ ಅವರು, ಸಿಆರ್‌ಪಿಎಫ್ ತನ್ನ ಯೋಧರನ್ನು ಸಾಗಿಸಲು ಹೆಲಿಕಾಪ್ಟರ್ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಯಾಕೆಂದರೆ, ಅಷ್ಟು ದೊಡ್ಡ ಬೆಂಗಾವಲು ಪಡೆ ರಸ್ತೆಯಲ್ಲಿ ತೆರಳಲು ಸಾಧ್ಯವಿರಲಿಲ್ಲ. ಆದರೆ, ಸಿಆರ್‌ಪಿಎಫ್ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿತ್ತು ಎಂದು ಪ್ರತಿಪಾದಿಸಿದ್ದರು.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

26 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

51 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago