BREAKING NEWS

ಪುಲ್ವಾಮ ದಾಳಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು: ಸತ್ಯಪಾಲ್‌ ಆಗ್ರಹ

ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ.

ಆ ವರ್ಷದ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ರಾಜಕೀಕರಣಗೊಳಿಸಿದರು ಎಂದೂ ಅವರು ಆರೋಪಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ನವದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸತ್ಯಪಾಲ್ ಮಲಿಕ್ ಅವರು ಈ ಹತ್ಯೆಗಳ ಕುರಿತು ಸರ್ಕಾರದ ಮೌನದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು The Telegraph ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಕೊನೆಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಾಗಿದ್ದು, ಅವರು ಆ ಹುದ್ದೆಯಲ್ಲಿದ್ದಾಗಲೇ ಪುಲ್ವಾಮಾ ಉಗ್ರರ ದಾಳಿಯು ನಡೆದಿತ್ತು.

“40 ಮಂದಿ ಯೋಧರ ಹತ್ಯೆಗೆ ಕಾರಣವಾದ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಇಲ್ಲಿಯವರೆಗೆ ಈ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಕಡು ಮೌನ ಪ್ರದರ್ಶಿಸಿದೆ ಹಾಗೂ ಈ ದುರಂತದಲ್ಲಿನ ಹತ್ಯೆಗಳಿಗೆ ತನ್ನ ಭದ್ರತಾ ವೈಫಲ್ಯವೇ ಕಾರಣ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ” ಎಂದು ಅವರು ಟೀಕಿಸಿದ್ದಾರೆ.

ಪುಲ್ವಾಮಾ ಉಗ್ರರ ದಾಳಿಯ ಕುರಿತು ಸರ್ಕಾರ ಹೊಣೆಗಾರಿಕೆ ಹೊರಬೇಕು ಎಂದು ಸತ್ಯಪಾಲ್ ಮಲಿಕ್ ಇದೇ ಪ್ರಥಮ ಬಾರಿಗೆ ಆಗ್ರಹಿಸುತ್ತಿರುವುದಲ್ಲ. The Wire ಸುದ್ದಿ ಸಂಸ್ಥೆಯ ಕರಣ್ ಥಾಪರ್ ಗೆ ಸ್ಫೋಟಕ ಸಂದರ್ಶನ ನೀಡಿದ್ದ ಅವರು, ಸಿಆರ್‌ಪಿಎಫ್ ತನ್ನ ಯೋಧರನ್ನು ಸಾಗಿಸಲು ಹೆಲಿಕಾಪ್ಟರ್ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಯಾಕೆಂದರೆ, ಅಷ್ಟು ದೊಡ್ಡ ಬೆಂಗಾವಲು ಪಡೆ ರಸ್ತೆಯಲ್ಲಿ ತೆರಳಲು ಸಾಧ್ಯವಿರಲಿಲ್ಲ. ಆದರೆ, ಸಿಆರ್‌ಪಿಎಫ್ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿತ್ತು ಎಂದು ಪ್ರತಿಪಾದಿಸಿದ್ದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago