Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಪುಲ್ವಾಮಾ ದಾಳಿ: ಜನರ ಮುಂದೆ ಸತ್ಯ ಮುಚ್ಚಿಟ್ಟಿಲ್ಲ- ಅಮಿತ್‌ ಶಾ

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್‌ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್‌ ʼದಿ ವೈರ್‌ʼ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.

ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್‌ ಶಾ ಅವರು, ಮಲ್ಲಿಕ್‌ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.

ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್‌ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್‌ ಆರೋಪಿಸಿದ್ದರು. ಆಗ ರಾಜನಾಥ್‌ ಸಿಂಗ್‌ ಕೇಂದ್ರ ಗೃಹ ಸಚಿವರಾಗಿದ್ದರು.

ಪಾಕಿಸ್ತಾನ ಮೂಲಕ ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!