ನವದೆಹಲಿ(ರಾಯಿಟರ್ಸ್): ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್ಪಿಎಫ್ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್ ʼದಿ ವೈರ್ʼ ಪೋರ್ಟಲ್ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.
ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ ಅವರು, ಮಲ್ಲಿಕ್ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.
ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್ಪಿಎಫ್ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್ ಆರೋಪಿಸಿದ್ದರು. ಆಗ ರಾಜನಾಥ್ ಸಿಂಗ್ ಕೇಂದ್ರ ಗೃಹ ಸಚಿವರಾಗಿದ್ದರು.
ಪಾಕಿಸ್ತಾನ ಮೂಲಕ ಜೈಷ್ ಎ ಮೊಹಮ್ಮದ್ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…