BREAKING NEWS

ಪುಲ್ವಾಮಾ ದಾಳಿ: ಜನರ ಮುಂದೆ ಸತ್ಯ ಮುಚ್ಚಿಟ್ಟಿಲ್ಲ- ಅಮಿತ್‌ ಶಾ

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್‌ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್‌ ʼದಿ ವೈರ್‌ʼ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.

ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್‌ ಶಾ ಅವರು, ಮಲ್ಲಿಕ್‌ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.

ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್‌ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್‌ ಆರೋಪಿಸಿದ್ದರು. ಆಗ ರಾಜನಾಥ್‌ ಸಿಂಗ್‌ ಕೇಂದ್ರ ಗೃಹ ಸಚಿವರಾಗಿದ್ದರು.

ಪಾಕಿಸ್ತಾನ ಮೂಲಕ ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.

andolanait

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

1 hour ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

1 hour ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

1 hour ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

1 hour ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

1 hour ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

2 hours ago