BREAKING NEWS

ಪುಲ್ವಾಮಾ ದಾಳಿ: ಜನರ ಮುಂದೆ ಸತ್ಯ ಮುಚ್ಚಿಟ್ಟಿಲ್ಲ- ಅಮಿತ್‌ ಶಾ

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್‌ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್‌ ʼದಿ ವೈರ್‌ʼ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.

ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್‌ ಶಾ ಅವರು, ಮಲ್ಲಿಕ್‌ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.

ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್‌ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್‌ ಆರೋಪಿಸಿದ್ದರು. ಆಗ ರಾಜನಾಥ್‌ ಸಿಂಗ್‌ ಕೇಂದ್ರ ಗೃಹ ಸಚಿವರಾಗಿದ್ದರು.

ಪಾಕಿಸ್ತಾನ ಮೂಲಕ ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.

andolanait

Recent Posts

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

2 hours ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

2 hours ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

4 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

4 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

5 hours ago