ನವದೆಹಲಿ: ‘ಸಿಆರ್ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ ಚುನಾವಣೆಯ ಲಾಭ ಪಡೆಯಲು ರೂಪಿಸಲಾಗಿದ್ದ ಯೋಜನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಿದೆ.
‘ಸಿಆರ್ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ಬರಲು ಐದು ಕಾಪ್ಟರ್ಗಳಿಗೆ ಮನವಿ ಮಾಡಿದ್ದರು. ಆದರೆ ರಕ್ಷಣಾ ಸಚಿವಾಲಯ ಅದನ್ನು ತಿರಸ್ಕರಿಸಿದೆ. ಅವರಿಗೆ ಅಂದು ಕಾಪ್ಟರ್ ಯಾಕೆ ಕೊಡಲಿಲ್ಲ? ಅವರನ್ನು ಯಾಕೆ ಏರ್ಲಿಫ್ಟ್ ಮಾಡಲಿಲ್ಲ? ಕಾಪ್ಟರ್ ವ್ಯವಸ್ಥೆ ಮಾಡಿದಿದ್ದರೆ ಭಯೋತ್ಪಾದನೆಯ ಸಂಚು ವಿಫಲವಾಗುತ್ತಿತ್ತು’ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.
‘ಜೈಶ್ ಸಂಘಟನೆಯ ಬೆದರಿಕೆಗಳನ್ನು ಏಕೆ ನಿರ್ಲಕ್ಷಿಸಯಿತು. 2019ರ ಜನವರಿ 2 ಮತ್ತು ಫೆಬ್ರುವರಿ13 ನಡುವೆ ಭಯೋತ್ಪಾದಕ ದಾಳಿ ನಡೆಯಬಹುದಾದ ಸಾಧ್ಯತೆಗಳ ಬಗ್ಗೆ ಬಂದಿದ್ದ 11 ಗುಪ್ತಚರ ಮಾಹಿತಿಗಳನ್ನು ಏಕೆ ನಿರ್ಲಕ್ಷಿಸಲಾಯಿತು. 300 ಕೆಜಿ ಆರ್ಡಿಎಕ್ಸ್ ಅನ್ನು ಉಗ್ರರು ಹೇಗೆ ಸಂಗ್ರಹಿಸಿದರು’ ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.
ಪ್ರಕರಣದ ತನಿಖೆ ಏನಾಯಿತು ಎಂಬುದರ ಬಗ್ಗೆಯೂ ಉತ್ತರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
‘ಕೇಂದ್ರ ಸರ್ಕಾರವು ‘ಕನಿಷ್ಟ ಆಡಳಿತ, ಗರಿಷ್ಠ ಮೌನ’ ಎಂಬ ತತ್ವ ಪಾಲಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುತ್ತಲೇ ಇರುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
2019ರ ಫೆಬ್ರುವರಿ 14ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಸಿಆರ್ಪಿಎಪ್ನ 40 ಯೋಧರು ಹುತಾತ್ಮರಾಗಿದ್ದರು.
ಬೆಂಗಳೂರು: ಮುಂಬರುವ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್.6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ…
ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15…
ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ…
ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ…