BREAKING NEWS

ಪುಲ್ವಾಮಾ ದಾಳಿ| CRPF ಯೋಧರಿಗೆ ಅಂದು ಕಾಪ್ಟರ್‌ ಕೊಡಲಿಲ್ಲ ಯಾಕೆ: ಕಾಂಗ್ರೆಸ್‌

ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ ಚುನಾವಣೆಯ ಲಾಭ ಪಡೆಯಲು ರೂಪಿಸಲಾಗಿದ್ದ ಯೋಜನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಿದೆ.

‘ಸಿಆರ್‌ಪಿಎಫ್‌ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ಬರಲು ಐದು ಕಾಪ್ಟರ್‌ಗಳಿಗೆ ಮನವಿ ಮಾಡಿದ್ದರು. ಆದರೆ ರಕ್ಷಣಾ ಸಚಿವಾಲಯ ಅದನ್ನು ತಿರಸ್ಕರಿಸಿದೆ. ಅವರಿಗೆ ಅಂದು ಕಾಪ್ಟರ್‌ ಯಾಕೆ ಕೊಡಲಿಲ್ಲ? ಅವರನ್ನು ಯಾಕೆ ಏರ್‌ಲಿಫ್ಟ್ ಮಾಡಲಿಲ್ಲ? ಕಾಪ್ಟರ್‌ ವ್ಯವಸ್ಥೆ ಮಾಡಿದಿದ್ದರೆ ಭಯೋತ್ಪಾದನೆಯ ಸಂಚು ವಿಫಲವಾಗುತ್ತಿತ್ತು’ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

‘ಜೈಶ್ ಸಂಘಟನೆಯ ಬೆದರಿಕೆಗಳನ್ನು ಏಕೆ ನಿರ್ಲಕ್ಷಿಸಯಿತು. 2019ರ ಜನವರಿ 2 ಮತ್ತು ಫೆಬ್ರುವರಿ13 ನಡುವೆ ಭಯೋತ್ಪಾದಕ ದಾಳಿ ನಡೆಯಬಹುದಾದ ಸಾಧ್ಯತೆಗಳ ಬಗ್ಗೆ ಬಂದಿದ್ದ 11 ಗುಪ್ತಚರ ಮಾಹಿತಿಗಳನ್ನು ಏಕೆ ನಿರ್ಲಕ್ಷಿಸಲಾಯಿತು. 300 ಕೆಜಿ ಆರ್‌ಡಿಎಕ್ಸ್ ಅನ್ನು ಉಗ್ರರು ಹೇಗೆ ಸಂಗ್ರಹಿಸಿದರು’ ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಪ್ರಕರಣದ ತನಿಖೆ ಏನಾಯಿತು ಎಂಬುದರ ಬಗ್ಗೆಯೂ ಉತ್ತರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

‘ಕೇಂದ್ರ ಸರ್ಕಾರವು ‘ಕನಿಷ್ಟ ಆಡಳಿತ, ಗರಿಷ್ಠ ಮೌನ’ ಎಂಬ ತತ್ವ ಪಾಲಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುತ್ತಲೇ ಇರುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

2019ರ ಫೆಬ್ರುವರಿ 14ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಸಿಆರ್‌ಪಿಎಪ್‌ನ 40 ಯೋಧರು ಹುತಾತ್ಮರಾಗಿದ್ದರು.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

7 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

10 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

11 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

11 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

11 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

11 hours ago