ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.
ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…