BREAKING NEWS

ಅರಣ್ಯದಂಚಿನ ಜಮೀನುಗಳಲ್ಲಿ ದಾಂದಲೆ ನಡೆಸುತ್ತಿದ್ದ ಪುಂಡಾನೆ ಸೆರೆ

ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ‌ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.

ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago