BREAKING NEWS

ಅರಣ್ಯದಂಚಿನ ಜಮೀನುಗಳಲ್ಲಿ ದಾಂದಲೆ ನಡೆಸುತ್ತಿದ್ದ ಪುಂಡಾನೆ ಸೆರೆ

ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ‌ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.

ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago