BREAKING NEWS

ಅರಣ್ಯದಂಚಿನ ಜಮೀನುಗಳಲ್ಲಿ ದಾಂದಲೆ ನಡೆಸುತ್ತಿದ್ದ ಪುಂಡಾನೆ ಸೆರೆ

ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ‌ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.

ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

lokesh

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

2 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

3 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

3 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

4 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

4 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

5 hours ago