ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.
ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…