Group of excited school children cheering in classroom
ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ.
ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ ಹಾಗೂ ದೇಣಿಗೆ ಸಂಗ್ರಹ ಮುಂತಾದುವುಗಳಿಂದ ಹಣವನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ವಿದ್ಯಾರ್ಥಿಗಳ ಹೆತ್ತವರಿಂದ ಹಲವಾರು ದೂರುಗಳು ಬಂದಿವೆ. ಹೀಗಾಗಿ ಈ ನಿರ್ಧಾರವನ್ನು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ತಂಡದಲ್ಲಿ ಒಂದು ಜಿಲ್ಲೆಯಿಂದ ಮೂವರು ಪ್ರಾಂಶುಪಾಲರು ಇರಲಿದ್ದು, ಅವರು ಶಿಕ್ಷಣ ಸಚಿವರಿಗೆ ಸಲ್ಲಿಕೆಯಾದ ದೂರುಗಳನ್ನು ಪರಿಶೀಲಿಸಿ ಖಾಸಗಿ ಶಾಲೆಗಳ ವಿರುದ್ಧ ತನಿಖೆ ನಡೆಸುತ್ತಾರೆ. ನಂತರ ತನಿಖಾ ವರದಿಯನ್ನು ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ನೀಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
’ಕೇವಲ ಒಂದನೇ ತರಗತಿಯ ಪಠ್ಯ ಪುಸ್ತಕಗಳಿಗೆ ಖಾಸಗಿ ಶಾಲೆಯೊಂದು ₹7,000 ದರ ವಿಧಿಸಿರುವುದು ಕಂಡು ಆಶ್ಚರ್ಯವಾಯಿತು. ನಮ್ಮ ಸರ್ಕಾರ ಶಿಕ್ಷಣವನ್ನು ವ್ಯಾಪಾರವಾಗಲು ಬಿಡುವುದಿಲ್ಲ. ಕಾನೂನು ನಿಯಮಗಳಿಗೆ ಒಳಪಟ್ಟಂತೆ ನಾವು ನಿರ್ಧಾರ ಕೈಗೊಂಡಿದ್ದು, ಅದನ್ನು ಮೀರಲು ಬಿಡುವುದಿಲ್ಲ.’ ಎಂದು ಶಿಕ್ಷಣ ಸಚಿವರು ಹೇಳಿದರು.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…