BREAKING NEWS

ಪಂಜಾಬ್: ಹಣ ಸುಲಿಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ತನಿಖೆಗೆ ಸಮಿತಿ

ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ.
ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ ಹಾಗೂ ದೇಣಿಗೆ ಸಂಗ್ರಹ ಮುಂತಾದುವುಗಳಿಂದ ಹಣವನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ವಿದ್ಯಾರ್ಥಿಗಳ ಹೆತ್ತವರಿಂದ ಹಲವಾರು ದೂರುಗಳು ಬಂದಿವೆ. ಹೀಗಾಗಿ ಈ ನಿರ್ಧಾರವನ್ನು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ತಂಡದಲ್ಲಿ ಒಂದು ಜಿಲ್ಲೆಯಿಂದ ಮೂವರು ಪ್ರಾಂಶುಪಾಲರು ಇರಲಿದ್ದು, ಅವರು ಶಿಕ್ಷಣ ಸಚಿವರಿಗೆ ಸಲ್ಲಿಕೆಯಾದ ದೂರುಗಳನ್ನು ಪರಿಶೀಲಿಸಿ ಖಾಸಗಿ ಶಾಲೆಗಳ ವಿರುದ್ಧ ತನಿಖೆ ನಡೆಸುತ್ತಾರೆ. ನಂತರ ತನಿಖಾ ವರದಿಯನ್ನು ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ನೀಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
’ಕೇವಲ ಒಂದನೇ ತರಗತಿಯ ಪಠ್ಯ ಪುಸ್ತಕಗಳಿಗೆ ಖಾಸಗಿ ಶಾಲೆಯೊಂದು ₹7,000 ದರ ವಿಧಿಸಿರುವುದು ಕಂಡು ಆಶ್ಚರ್ಯವಾಯಿತು. ನಮ್ಮ ಸರ್ಕಾರ ಶಿಕ್ಷಣವನ್ನು ವ್ಯಾಪಾರವಾಗಲು ಬಿಡುವುದಿಲ್ಲ. ಕಾನೂನು ನಿಯಮಗಳಿಗೆ ಒಳಪಟ್ಟಂತೆ ನಾವು ನಿರ್ಧಾರ ಕೈಗೊಂಡಿದ್ದು, ಅದನ್ನು ಮೀರಲು ಬಿಡುವುದಿಲ್ಲ.’ ಎಂದು ಶಿಕ್ಷಣ ಸಚಿವರು ಹೇಳಿದರು.

lokesh

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

14 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago