Group of excited school children cheering in classroom
ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ.
ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ ಹಾಗೂ ದೇಣಿಗೆ ಸಂಗ್ರಹ ಮುಂತಾದುವುಗಳಿಂದ ಹಣವನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ವಿದ್ಯಾರ್ಥಿಗಳ ಹೆತ್ತವರಿಂದ ಹಲವಾರು ದೂರುಗಳು ಬಂದಿವೆ. ಹೀಗಾಗಿ ಈ ನಿರ್ಧಾರವನ್ನು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ತಂಡದಲ್ಲಿ ಒಂದು ಜಿಲ್ಲೆಯಿಂದ ಮೂವರು ಪ್ರಾಂಶುಪಾಲರು ಇರಲಿದ್ದು, ಅವರು ಶಿಕ್ಷಣ ಸಚಿವರಿಗೆ ಸಲ್ಲಿಕೆಯಾದ ದೂರುಗಳನ್ನು ಪರಿಶೀಲಿಸಿ ಖಾಸಗಿ ಶಾಲೆಗಳ ವಿರುದ್ಧ ತನಿಖೆ ನಡೆಸುತ್ತಾರೆ. ನಂತರ ತನಿಖಾ ವರದಿಯನ್ನು ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ನೀಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
’ಕೇವಲ ಒಂದನೇ ತರಗತಿಯ ಪಠ್ಯ ಪುಸ್ತಕಗಳಿಗೆ ಖಾಸಗಿ ಶಾಲೆಯೊಂದು ₹7,000 ದರ ವಿಧಿಸಿರುವುದು ಕಂಡು ಆಶ್ಚರ್ಯವಾಯಿತು. ನಮ್ಮ ಸರ್ಕಾರ ಶಿಕ್ಷಣವನ್ನು ವ್ಯಾಪಾರವಾಗಲು ಬಿಡುವುದಿಲ್ಲ. ಕಾನೂನು ನಿಯಮಗಳಿಗೆ ಒಳಪಟ್ಟಂತೆ ನಾವು ನಿರ್ಧಾರ ಕೈಗೊಂಡಿದ್ದು, ಅದನ್ನು ಮೀರಲು ಬಿಡುವುದಿಲ್ಲ.’ ಎಂದು ಶಿಕ್ಷಣ ಸಚಿವರು ಹೇಳಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…