BREAKING NEWS

ಟೀಮ್‌ ಇಂಡಿಯಾ ಕೋಚ್‌ ಆಗಿ ಮುಂದುವರೆಯಲಿದ್ದಾರೆ ರಾಹುಲ್‌ ದ್ರಾವಿಡ್‌

ಈ ಬಾರಿಯ ವಿಶ್ವಕಪ್‌ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌‌ ಹೆಡ್ ಕೋಚ್‌ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್‌ನಲ್ಲಿ ಸೆಮಿಫೈನಲ್‌ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್‌ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.

ಈ ಸೋಲಿನಿಂದಾಗಿ ರಾಹುಲ್‌ ದ್ರಾವಿಡ್‌ ಕೋಚ್‌ ಆಗಿ ಮುಂದುವರೆಯುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆ ಹಾಗೂ ನೂತನ ಕೋಚ್‌ ಆಗಿ ವಿವಿಎಸ್‌ ಲಕ್ಷ್ಮಣ್‌ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳೂ ಸಹ ಹರಿದಾಡಿದ್ದವು. ಆದರೆ ಇದೀಗ ಬಿಸಿಸಿಐ ಹೆಡ್ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಅವರನ್ನೇ ಮುಂದುವರಿಸಲು ನಿರ್ಧರಿಸಿದ್ದು ಹರಿದಾಡಿದ್ದ ಎಲ್ಲಾ ಊಹಾಪೋಹಗಳಿಗೆ ಬ್ರೇಕ್‌ ಬಿದ್ದಿದೆ.

ಸದ್ಯ ರಾಹುಲ್‌ ದ್ರಾವಿಡ್‌ ಹೆಡ್‌ ಕೋಚ್‌ ಅವಧಿಯನ್ನು ವಿಸ್ತರಿಸಿರುವ ಬಿಸಿಸಿಐ ಎಲ್ಲಿಯವರೆಗೆ ಈ ವಿಸ್ತರಣೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಆದರೆ ಮುಂಬರುವ ವರ್ಷ ಟಿ 20 ವಿಶ್ವಕಪ್‌ ಟೂರ್ನಿ ನಡೆಯಲಿದ್ದು ಕನಿಷ್ಟ ಅಲ್ಲಿಯವರೆಗಾದರೂ ರಾಹುಲ್‌ ದ್ರಾವಿಡ್‌ ತಂಡದ ಕೋಚ್‌ ಆಗಿ ಮುಂದುವರೆಯುವುದಂತೂ ಖಚಿತ ಎನ್ನಬಹುದು.

2021ರ ನವೆಂಬರ್‌ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಕೋಚ್‌ ಆಗಿ ನೇಮಕವಾಗಿದ್ದ ರಾಹುಲ್‌ ದ್ರಾವಿಡ್‌ ತಂಡವನ್ನು ತಮ್ಮ ಕೋಚಿಂಗ್‌ ಅಡಿಯಲ್ಲಿ ಎಲ್ಲಾ ಕ್ರಿಕೆಟ್‌ ಮಾದರಿಯಲ್ಲೂ ಅಗ್ರಸ್ಥಾಕ್ಕೇರಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಬಾರಿಯ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್‌ವರೆಗೂ ಕರೆತಂದ ಸಾಧನೆ ಹಾಗೂ ಇದೇ ವರ್ಷ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲಿಸ್ಟ್‌ ಮಾಡಿದ ಸಾಧನೆ ಸಹ ದ್ರಾವಿಡ್‌ ಹೆಸರಿನಲ್ಲಿದೆ.

 

andolana

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

2 hours ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

2 hours ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

2 hours ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

2 hours ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

2 hours ago