ಈ ಬಾರಿಯ ವಿಶ್ವಕಪ್ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್ನಲ್ಲಿ ಸೆಮಿಫೈನಲ್ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.
ಈ ಸೋಲಿನಿಂದಾಗಿ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆ ಹಾಗೂ ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳೂ ಸಹ ಹರಿದಾಡಿದ್ದವು. ಆದರೆ ಇದೀಗ ಬಿಸಿಸಿಐ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನೇ ಮುಂದುವರಿಸಲು ನಿರ್ಧರಿಸಿದ್ದು ಹರಿದಾಡಿದ್ದ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ.
ಸದ್ಯ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯನ್ನು ವಿಸ್ತರಿಸಿರುವ ಬಿಸಿಸಿಐ ಎಲ್ಲಿಯವರೆಗೆ ಈ ವಿಸ್ತರಣೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಆದರೆ ಮುಂಬರುವ ವರ್ಷ ಟಿ 20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಕನಿಷ್ಟ ಅಲ್ಲಿಯವರೆಗಾದರೂ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಮುಂದುವರೆಯುವುದಂತೂ ಖಚಿತ ಎನ್ನಬಹುದು.
2021ರ ನವೆಂಬರ್ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಕೋಚ್ ಆಗಿ ನೇಮಕವಾಗಿದ್ದ ರಾಹುಲ್ ದ್ರಾವಿಡ್ ತಂಡವನ್ನು ತಮ್ಮ ಕೋಚಿಂಗ್ ಅಡಿಯಲ್ಲಿ ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಅಗ್ರಸ್ಥಾಕ್ಕೇರಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಬಾರಿಯ ವಿಶ್ವಕಪ್ನಲ್ಲಿ ತಂಡವನ್ನು ಫೈನಲ್ವರೆಗೂ ಕರೆತಂದ ಸಾಧನೆ ಹಾಗೂ ಇದೇ ವರ್ಷ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲಿಸ್ಟ್ ಮಾಡಿದ ಸಾಧನೆ ಸಹ ದ್ರಾವಿಡ್ ಹೆಸರಿನಲ್ಲಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…