ಈ ಬಾರಿಯ ವಿಶ್ವಕಪ್ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್ನಲ್ಲಿ ಸೆಮಿಫೈನಲ್ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.
ಈ ಸೋಲಿನಿಂದಾಗಿ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆ ಹಾಗೂ ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳೂ ಸಹ ಹರಿದಾಡಿದ್ದವು. ಆದರೆ ಇದೀಗ ಬಿಸಿಸಿಐ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನೇ ಮುಂದುವರಿಸಲು ನಿರ್ಧರಿಸಿದ್ದು ಹರಿದಾಡಿದ್ದ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ.
ಸದ್ಯ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯನ್ನು ವಿಸ್ತರಿಸಿರುವ ಬಿಸಿಸಿಐ ಎಲ್ಲಿಯವರೆಗೆ ಈ ವಿಸ್ತರಣೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಆದರೆ ಮುಂಬರುವ ವರ್ಷ ಟಿ 20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಕನಿಷ್ಟ ಅಲ್ಲಿಯವರೆಗಾದರೂ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಮುಂದುವರೆಯುವುದಂತೂ ಖಚಿತ ಎನ್ನಬಹುದು.
2021ರ ನವೆಂಬರ್ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಕೋಚ್ ಆಗಿ ನೇಮಕವಾಗಿದ್ದ ರಾಹುಲ್ ದ್ರಾವಿಡ್ ತಂಡವನ್ನು ತಮ್ಮ ಕೋಚಿಂಗ್ ಅಡಿಯಲ್ಲಿ ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಅಗ್ರಸ್ಥಾಕ್ಕೇರಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಬಾರಿಯ ವಿಶ್ವಕಪ್ನಲ್ಲಿ ತಂಡವನ್ನು ಫೈನಲ್ವರೆಗೂ ಕರೆತಂದ ಸಾಧನೆ ಹಾಗೂ ಇದೇ ವರ್ಷ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲಿಸ್ಟ್ ಮಾಡಿದ ಸಾಧನೆ ಸಹ ದ್ರಾವಿಡ್ ಹೆಸರಿನಲ್ಲಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…