BREAKING NEWS

ಟೀಮ್‌ ಇಂಡಿಯಾ ಕೋಚ್‌ ಆಗಿ ಮುಂದುವರೆಯಲಿದ್ದಾರೆ ರಾಹುಲ್‌ ದ್ರಾವಿಡ್‌

ಈ ಬಾರಿಯ ವಿಶ್ವಕಪ್‌ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್‌ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌‌ ಹೆಡ್ ಕೋಚ್‌ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್‌ನಲ್ಲಿ ಸೆಮಿಫೈನಲ್‌ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್‌ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.

ಈ ಸೋಲಿನಿಂದಾಗಿ ರಾಹುಲ್‌ ದ್ರಾವಿಡ್‌ ಕೋಚ್‌ ಆಗಿ ಮುಂದುವರೆಯುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆ ಹಾಗೂ ನೂತನ ಕೋಚ್‌ ಆಗಿ ವಿವಿಎಸ್‌ ಲಕ್ಷ್ಮಣ್‌ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳೂ ಸಹ ಹರಿದಾಡಿದ್ದವು. ಆದರೆ ಇದೀಗ ಬಿಸಿಸಿಐ ಹೆಡ್ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಅವರನ್ನೇ ಮುಂದುವರಿಸಲು ನಿರ್ಧರಿಸಿದ್ದು ಹರಿದಾಡಿದ್ದ ಎಲ್ಲಾ ಊಹಾಪೋಹಗಳಿಗೆ ಬ್ರೇಕ್‌ ಬಿದ್ದಿದೆ.

ಸದ್ಯ ರಾಹುಲ್‌ ದ್ರಾವಿಡ್‌ ಹೆಡ್‌ ಕೋಚ್‌ ಅವಧಿಯನ್ನು ವಿಸ್ತರಿಸಿರುವ ಬಿಸಿಸಿಐ ಎಲ್ಲಿಯವರೆಗೆ ಈ ವಿಸ್ತರಣೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಆದರೆ ಮುಂಬರುವ ವರ್ಷ ಟಿ 20 ವಿಶ್ವಕಪ್‌ ಟೂರ್ನಿ ನಡೆಯಲಿದ್ದು ಕನಿಷ್ಟ ಅಲ್ಲಿಯವರೆಗಾದರೂ ರಾಹುಲ್‌ ದ್ರಾವಿಡ್‌ ತಂಡದ ಕೋಚ್‌ ಆಗಿ ಮುಂದುವರೆಯುವುದಂತೂ ಖಚಿತ ಎನ್ನಬಹುದು.

2021ರ ನವೆಂಬರ್‌ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಕೋಚ್‌ ಆಗಿ ನೇಮಕವಾಗಿದ್ದ ರಾಹುಲ್‌ ದ್ರಾವಿಡ್‌ ತಂಡವನ್ನು ತಮ್ಮ ಕೋಚಿಂಗ್‌ ಅಡಿಯಲ್ಲಿ ಎಲ್ಲಾ ಕ್ರಿಕೆಟ್‌ ಮಾದರಿಯಲ್ಲೂ ಅಗ್ರಸ್ಥಾಕ್ಕೇರಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಬಾರಿಯ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್‌ವರೆಗೂ ಕರೆತಂದ ಸಾಧನೆ ಹಾಗೂ ಇದೇ ವರ್ಷ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಫೈನಲಿಸ್ಟ್‌ ಮಾಡಿದ ಸಾಧನೆ ಸಹ ದ್ರಾವಿಡ್‌ ಹೆಸರಿನಲ್ಲಿದೆ.

 

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago