BREAKING NEWS

­ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ನೇಮಕ!

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ) ಇಂದು (ಜೂನ್‌.8) ಅಂಗೀಕರಿಸಿದೆ.

ಲೋಕಸಭಾ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್‌ ಗಾಂಧಿ ಅವರು ವಹಿಸಿಕೊಳ್ಳುವಂತೆ ಸಿಡಬ್ಲ್ಯೂಸಿ ಮನವಿ ಮಾಡಿದೆ ಅದಕ್ಕೆ ಈ ಸಂಬಂಧ ಯೋಚಿಸಲಾಗುವುದು ಎಂದು ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

ಲೋಕಸಭಾ ವಿಪಕ್ಷ ನಾಯಕನ ಸ್ಥಾನ ಒಪ್ಪಿಕೊಳ್ಳುವ ಬಗ್ಗೆ ರಾಹುಲ್‌ ಗಾಂಧಿ ಅವರು ಶೀಘ್ರದಲ್ಲಿಯೇ ತಿಳಿಸಲಿದ್ದಾರೆ. ನಮ್ಮೆಲ್ಲಾ ಕಾರ್ಯಕರ್ತರು, ನಾಯಕರು ಬಹಳ ಉತ್ಸುಹಕತೆಯಿಂದ ಇದ್ದು, ನಾಲ್ಕು ತಿಂಗಳ ಹಿಂದೆ ಇದ್ದ ವಾತಾವರಣ ಈಗ ನಮ್ಮಲ್ಲಿಲ್ಲ ಎಂದು ಹೇಳಿದರು.

ಇನ್ನು ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರಿಗೆ ಪ್ರಧಾನಿ ಹುದ್ದೆಯ ಆಫರ್‌ ಬಂದಿತ್ತು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಷ್ಟೆ ಉತ್ತರ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

7 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

8 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

8 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

9 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

9 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

11 hours ago