ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜೋಕರ್ಗೆ ಹೋಲಿಸಿದ್ದಾರೆ.
ರಾಹುಲ್ ಗಾಂಧಿ ಅಂದರೆ ಇಂಟರ್ನ್ಯಾಶನಲ್ ಜೋಕರ್ ಇದ್ದಂತೆ. ಅಂಥವರನ್ನು ಪ್ರಧಾನಮಂತ್ರಿ ಮಾಡಲು ಇಂದು ನಮ್ಮ ರಾಜ್ಯವನ್ನು ಬಲಿ ಕೊಡುತ್ತಿದ್ದಾರೆ. ಬರಗಾಲ ಘೋಷಣೆ ಮಾಡಬೇಕಲ್ಲಾ? ನಾನು ಮೊನ್ನೆ ರಾಯಚೂರು ಜಿಲ್ಲೆಗೆ ಹೋಗಿದ್ದೆ. ತಿಂಥಣಿ ಬ್ರಿಜ್ನಲ್ಲಿ ಪಕ್ಷಿಗಳಿಗೂ ಸಹ ಕುಡಿಯಲು ನೀರಿಲ್ಲ. ಅಷ್ಟು ಭಯಾನಕ ಬರಗಾಲವಿದೆ. ರೈತರಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಸಿಗುತ್ತಿಲ್ಲ. ರೈತರ ಪಂಪ್ಸೆಟ್ಗಳು ಬಂದ್ ಆಗಿವೆ. ಮೂರು ತಾಸು, ಎರಡೂವರೆ ತಾಸು ವಿದ್ಯುತ್, ಅದೂ ರಾತ್ರಿ ಕೊಡುತ್ತಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಕೇವಲ ಮೂರು ನಾಲ್ಕು ತಿಂಗಳುಗಳಲ್ಲಿಯೇ ವಿಫಲವಾಗಿದೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…