BREAKING NEWS

ರಾಹುಲ್‌ ಗಾಂಧಿ ಇಂಟರ್​​ನ್ಯಾಶನಲ್‌ ಜೋಕರ್‌ : ಬಸನಗೌಡ ಪಾಟೀಲ್

ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್​​​ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜೋಕರ್​​ಗೆ ಹೋಲಿಸಿದ್ದಾರೆ.

ರಾಹುಲ್‌ ಗಾಂಧಿ ಅಂದರೆ ಇಂಟರ್​​ನ್ಯಾಶನಲ್‌ ಜೋಕರ್‌ ಇದ್ದಂತೆ. ಅಂಥವರನ್ನು ಪ್ರಧಾನಮಂತ್ರಿ ಮಾಡಲು ಇಂದು ನಮ್ಮ ರಾಜ್ಯವನ್ನು ಬಲಿ ಕೊಡುತ್ತಿದ್ದಾರೆ. ಬರಗಾಲ ಘೋಷಣೆ ಮಾಡಬೇಕಲ್ಲಾ? ನಾನು ಮೊನ್ನೆ ರಾಯಚೂರು ಜಿಲ್ಲೆಗೆ ಹೋಗಿದ್ದೆ. ತಿಂಥಣಿ ಬ್ರಿಜ್‌ನಲ್ಲಿ ಪಕ್ಷಿಗಳಿಗೂ ಸಹ ಕುಡಿಯಲು ನೀರಿಲ್ಲ. ಅಷ್ಟು ಭಯಾನಕ ಬರಗಾಲವಿದೆ. ರೈತರಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್‌ ಸಿಗುತ್ತಿಲ್ಲ. ರೈತರ ಪಂಪ್‌ಸೆಟ್‌ಗಳು ಬಂದ್‌ ಆಗಿವೆ. ಮೂರು ತಾಸು, ಎರಡೂವರೆ ತಾಸು ವಿದ್ಯುತ್, ಅದೂ ರಾತ್ರಿ ಕೊಡುತ್ತಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಲ್ಲಾ ರಂಗದಲ್ಲಿ ವಿಫಲವಾಗಿದೆ. ಕೇವಲ ಮೂರು ನಾಲ್ಕು ತಿಂಗಳುಗಳಲ್ಲಿಯೇ ವಿಫಲವಾಗಿದೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.

lokesh

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

7 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

7 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

7 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

7 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

9 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

10 hours ago